ಹೊಸದಿಗಂತ ವರದಿ, ಮಂಗಳೂರು:
ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ.
ಇಂದು ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರವು, ಮಂಗಳೂರು ನಗರದ ಉಪ ನಿರೀಕ್ಷಕ ಮತ್ತು ಪೊಲೀಸ್ ಆಯುಕ್ತರಾಗಿದ್ದ ಅನುಪಮ್ ಅಗರವಾಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ . ನೂತನ ಉಪ ನಿರೀಕ್ಷಕರಾಗಿ ಸುಧೀರ್ ಕುಮಾರ್ ರೆಡ್ಡಿ. ಸಿಎಚ್ ಅವರನ್ನು ನೇಮಕ ಮಾಡಿ ಆದೇಶ ನೀಡಿದೆ.
ಅದೇ ರೀತಿ ದಕ್ಷಿಣ ಕನ್ನಡ, ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಯತೀಶ್.ಎನ್ ಅವರನ್ನು ಕೂಡ ವರ್ಗಾವಣೆ ಮಾಡಲಾಗಿದೆ . ಅವರ ಜಾಗಕ್ಕೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ,ಅವರ ನೇಮಕ ಮಾಡಲಾಗಿದೆ.
ಇನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಬೊರಸೆ ಭೂಷಣ್ ಗುಲಾಬ್ರಾವ್, ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ, ಅಪರಾಧ ತನಿಖಾ ಇಲಾಖೆಯ ಉಪ ನಿರೀಕ್ಷಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಳಗಾವಿ ನಗರದ ಉಪ ನಿರೀಕ್ಷಕ ಜನರಲ್ ಆಫ್ ಪೊಲೀಸ್ ಮತ್ತು ಪೊಲೀಸ್ ಆಯುಕ್ತರಾಗಿ ಇಯಾಡಾ ಮಾರ್ಟಿನ್ ಮಾರ್ಬನಿಯಾಂಗ್ ಅವರನ್ನು ವರ್ಗಾವಣೆ ಮಾಡಲಾಗಿದೆ.