BIG NEWS | ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ: ಪೊಲೀಸ್ ಅಧಿಕಾರಿ ಹುತಾತ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು, ಕಾಶ್ಮೀರದ ಶ್ರೀನಗರದ ಲಾಲ್​ ಬಜಾರ್​ನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿರುವ ಪರಿಣಾಮ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದು, ಉಳಿದಂತೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಲಾಲ್ ಬಜಾರ್‌ನಲ್ಲಿ ಪೊಲೀಸ್ ಚೆಕ್‌ಪೋಸ್ಟ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆಂದು ತಿಳಿದು ಬಂದಿದೆ. ಗಾಯಗೊಂಡಿರುವ ಪೊಲೀಸರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶ್ರೀನಗರ ಪೊಲೀಸರು ಟ್ವೀಟ್​ ಮಾಡಿ ಮಾಹಿತಿ ನೀಡಿದ್ದಾರೆ.
ಮೃತ ಅಧಿಕಾರಿಯನ್ನ ಮುಷ್ತಾಕ್​​ ಅಹ್ಮದ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಇಬ್ಬರು ಪೊಲೀಸರಲ್ಲಿ ಒರ್ವ ಹೆಡ್ ಕಾನ್‌ಸ್ಟೆಬಲ್ ಮತ್ತೋರ್ವ ಎಸ್‌ಪಿಒ ಆಗಿದ್ದಾರೆ. ಘಟನೆ ನಡೆದ ಸ್ಥಳವನ್ನ ಪೊಲೀಸರು ಸುತ್ತುವರೆದಿದ್ದಾರೆ.
ಲಾಲ್ ಬಜಾರ್ ಪ್ರದೇಶದ ಜಿಡಿ ಗೋಂಕಾ ಶಾಲೆಯ ಬಳಿ ಈ ದಾಳಿ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!