BIG NEWS | ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕ್ಸೇಸ್‌ನಲ್ಲಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಪೋಕ್ಸೋ ಕ್ಸೇಸ್‌ನಲ್ಲಿ ವಿಚಾರಣೆಗೆ ಹಾಜರಾಗಲು ನೊಟೀಸ್ ಜಾರಿ ಮಾಡಲಾಗಿತ್ತು. ಆದರೆ, ವಿಚಾರಣೆಗೆ ಬರದೇ ಕಾಲಾವಕಾಶ ಕೋರಿದ್ದ ಜೊತೆಗೆ ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿ ತಿರಸ್ಕರಿಸಿದ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಇದರಿಂದ ಯಡಿಯೂರಪ್ಪ ಬಂಧನವಾಗುವ ಸಾಧ್ಯತೆಯಿದೆ.

ಈ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಐಡಿ ತನಿಖೆಗೆ ವಹಿಸಲಾಗಿತ್ತು. ಆದರೆ, ಪ್ರಕರಣದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದರು. ಪೋಕ್ಸೋ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಲಯ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗಲು ನೊಟೀಸ್ ಜಾರಿ ಮಾಡಲಾಗಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!