BIG NEWS | ಕದನ ವಿರಾಮ ಬೆನ್ನಿಗೆ ತನ್ನ ನರಿ ಬುದ್ದಿ ತೋರಿದ ಪಾಕ್: ಭಾರತದ ಮೇಲೆ ಮತ್ತೆ ಡ್ರೋನ್ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಭಾರತ ಮತ್ತು ಪಾಕಿಸ್ತಾನ ಇಂದು ಸಂಜೆ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿ ಉಭಯ ರಾಷ್ಟ್ರಗಳ ನಡುವಿನ ಯುದ್ಧದ ವಾತಾವರಣಕ್ಕೆ ತಾತ್ಕಾಲಿಕ ಅಂತ್ಯ ಹೇಳಿದ ಮೂರೇ ಗಂಟೆಯಲ್ಲಿ ತನ್ನ ಚಾಳಿ ಬಿಡದ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ.

ಜಮ್ಮು-ಕಾಶ್ಮೀರದ ವಿವಿಧ ಸೆಕ್ಟರ್‌ನಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿಕ ಪಾಕ್‌ ಸೇನೆ ಅಪ್ರಚೋದಿತ ದಾಳಿ ನಡೆಸಿದೆ. ಅಖ್ನೂರ್‌, ರಜೌರಿ ಮತ್ತು ಪೂಂಛ್‌ನಲ್ಲಿ ಈ ದಾಳಿ ನಡೆದಿರುವ ವರದಿಯಾಗಿದೆ.

ಜಮ್ಮು ಕಾಶ್ಮೀರದ ಹಲವೆಡೆಗಳಲ್ಲಿ ದಾಳಿ ನಡೆಸಿದೆ. ಶ್ರೀನಗರ ಮೇಲೆ ಪಾಕ್‌ನ ಹಲವು ಡ್ರೋನ್‌ಗಳು ಹಾರಾಡುತ್ತಿದ್ದು, ಮುಖ್ಯಮಂತ್ರಿ ಉಮರ್‌ ಅಬ್ದುಲ್ಲಾ ಇದನ್ನು ಖಚಿತಪಡಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!