ಹೊಸದಿಗಂತ ಡಿಜಿಟಲ್ ಡೆಸ್ಕ್
ಲೋಕಸಭೆಯಲ್ಲಿ ಗದ್ದವೆಬ್ಬಿಸಿದ ಆರೋಪದ ಮೇಲೆ ನಾಲ್ವರು ಕಾಂಗ್ರೆಸ್ ಸಂಸದರನ್ನು ಇಡೀ ಅಧಿವೇಶನದಿಂದ ಅಮಾನತುಗೊಳಿಸಿ ಸಭಾಪತಿ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ.
ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆಗಳು ಮತ್ತು ಘೋಷಣೆಗಳ ನಂತ್ರ ನಾಲ್ವರು ಕಾಂಗ್ರೆಸ್ ಸಂಸದರನ್ನ ಸೋಮವಾರ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.
ಮಾಣಿಕಮ್ ಟ್ಯಾಗೋರ್, ರಮ್ಯಾ ಹರಿದಾಸ್, ಜ್ಯೋತಿಮಣಿ ಮತ್ತು ಟಿ.ಎನ್.ಪ್ರತಾಪನ್ ಈ ನಾಲ್ವರು ಕಾಂಗ್ರೆಸ್ ಸಂಸದರು.
ಇನ್ನು ಲೋಕಸಭೆಯಲ್ಲಿ ಗದ್ದಲ ಮುಂದುವರೆದ ಪರಿಣಾಮ ಕಲಾಪವನ್ನ ನಾಳೆಗೆ ಮುಂದೂಡಲಾಗಿದೆ.