ಹೊಸದಿಗಂತ ಡಿಜಿಟಲ್ ಡೆಸ್ಕ್
ಭೂ ಹಗರಣ ಪ್ರಕರಣದಲ್ಲಿಬಂಧನಕ್ಕೆ ಒಳಗಾಗಿರುವ ಶಿವಸೇನೆಯ ಮುಖಂಡ ಸಂಜಯ್ ರಾವತ್ ಅವರನ್ನು ನ್ಯಾಯಾಲಯವು ಆಗಸ್ಟ್ 4ರವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದೆ.
ಕೊಳೆಗೇರಿ ಪುನರಾಭಿವೃದ್ಧಿ ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ರಾವತ್ ಅವರನ್ನು ನಿನ್ನೆ ತಡರಾತ್ರಿ ಬಂಧಿಸಲಾಯಿತು.
ಎಂಟು ದಿನಗಳ ಕಸ್ಟಡಿಗೆ ಕೋರಿದ ಇಡಿ, ರಾವತ್ ಅವರು ಸಾಕ್ಷ್ಯಗಳನ್ನು ತಿರುಚುತ್ತಿದ್ದಾರೆ ಮತ್ತು ಅವರು ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಲವಾರು ನಿರ್ಣಾಯಕ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಹೇಳಿತ್ತು.
ವಾದಗಳನ್ನು ಕೇಳಿದ ಕೋರ್ಟ್ ಅವರನ್ನು ಆಗಸ್ಟ್ 4ರವರೆಗೆ ಇಡಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.