ಹೊಸದಿಗಂತ ಡಿಜಿಟಲ್ ಡೆಸ್ಕ್
2006ರ ವಾರಾಣಸಿಯಲ್ಲಿ ಅವಳಿ ಸ್ಫೋಟ ಪ್ರಕರಣದ ಪ್ರಮುಖ ಅಪರಾಧಿ ವಾಲಿವುಲ್ಲಾ ಖಾನ್ ಗೆ ಉತ್ತರ ಪ್ರದೇಶದ ಗಾಜಿಯಾಬಾದ್ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ.
ವಾಲಿವುಲ್ಲಾ 2006ರಲ್ಲಿ ವಾರಣಾಸಿಯ ದೇವಸ್ಥಾನ, ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಿದ್ದನು.
ಎರಡನೆಯ ಪ್ರಕರಣದಲ್ಲಿ ಅವನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು.
2006ರ ಮಾರ್ಚ್ 7ರಂದು ಸಂಕಟ್ ಮೋಚನ್ ದೇವಸ್ಥಾನ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ 20 ಮಂದಿ ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.