ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಗೆ ಬಿಗ್ ರಿಲೀಫ್: ಜೂ.20ರವರೆಗೆ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಯಾಂಡಲ್ ವುಡ್ ನಟ ಚೇತನ್ ಒಸಿಐ ಮಾನ್ಯತೆ ರದ್ದಾಗುವ ವಿಚಾರವಾಗಿ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ. ತಡೆಯಾಜ್ಞೆಯನ್ನು ಜೂನ್.20ರವರೆಗೆ ವಿಸ್ತರಿಸಿದೆ.

ನಟ ಚೇತನ್ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ, ಕೇಂದ್ರ ಗೃಹ ಸಚಿವಾಲಯ ಭಾರತದ ಸಾಗರೋತ್ತರ ನಾಗರಿಕ ( OCI) ವೀಸಾವನ್ನು ರದ್ದುಗೊಳಿಸಲಾಗಿತ್ತು.ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಅವರಿಗೆ ಒಸಿಐ ವೀಸಾ ರದ್ದು ಆದೇಶಕ್ಕೆ ತಡೆಯಾಜ್ಞೆಯನ್ನು ನೀಡಲಾಗಿತ್ತು.

ಇದೀಗ ಇಂದು ಮತ್ತೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು, ಜೂನ್.20ರವರೆಗೆ ತಡೆಯಾಜ್ಞೆಯನ್ನು ವಿಸ್ತರಿಸಿದೆ. ಈ ಮೂಲಕ ಮತ್ತೆ ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಗೆ ಮತ್ತೆ ರಿಲೀಫ್ ಸಿಕ್ಕಂತೆ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!