ಆಲೂರಿನ ಗ್ರಾಮಸ್ಥರಿಗೆ ಬಿಗ್ ರಿಲೀಫ್: ಕೊನೆಗೂ ಬೋನಿಗೆ ಬಿದ್ದ ಚಿರತೆ

ಹೊಸದಿಗಂತ ವರದಿ ಹಾಸನ : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಬಿದ್ದಿದೆ. ಚಿರತೆ ಸೆರೆ ಸಿಕ್ಕಿರುವ ಹಿನ್ನೆಲೆಯಲ್ಲಿ ಭಯದಲ್ಲಿದ್ದ ಸುತ್ತಮುತ್ತಲಿನ ಗ್ರಾಮಸ್ಥರು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ. ಆಲೂರು ತಾಲ್ಲೂಕಿನ ಕದಾಳು, ಕಬ್ಬಿನಹಳ್ಳಿ, ಬಿಲುಗುಂದ, ಮುಳುಗಡೆ ಹಾಗೂ ಗೊದ್ದನಕೊಪ್ಪಲು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ಚಿರತೆ ಓಡಾಟ ಕಂಡುಬಂದಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಿರತೆಯನ್ನು … Continue reading ಆಲೂರಿನ ಗ್ರಾಮಸ್ಥರಿಗೆ ಬಿಗ್ ರಿಲೀಫ್: ಕೊನೆಗೂ ಬೋನಿಗೆ ಬಿದ್ದ ಚಿರತೆ