ಬಿಎಸ್ ಯಡಿಯೂರಪ್ಪ ಗೆ ಬಿಗ್ ರಿಲೀಫ್: ತಡೆಯಾಜ್ಞೆ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅವ್ಯವಹಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆಯನ್ನು ನೀಡಿತ್ತು. ಇದೀಗ ಮತ್ತೆ ಈ ತಡೆಯಾಜ್ಞೆಯನ್ನು ಮುಂದುವರಿಸಿ ಆದೇಶಿಸಿದೆ.ಈ ಮೂಲಕ ಬಿಎಸ್ ವೈಗೆ ಬಿಗ್ ರಿಲೀಫ್ ನೀಡಿದೆ.

ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ 2 ಕೋಟಿ ಲಂಚ ಪ್ರಕರಣ ಸಂಬಂಧ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದಲ್ಲಿ ತನಿಖೆಗೆ ತಾತ್ಕಾಲಿಕವಾಗಿ ತಡೆಯಾಜ್ಞೆಯನ್ನು ನೀಡಿತ್ತು.

ಇಂದು ಸುಪ್ರೀಂ ಕೋರ್ಟ್ ನೀಡಿದ್ದ ತಾತ್ಕಾಲಿಕ ತಡೆಯಾಜ್ಞೆ ಕೊನೆಗೊಂಡಿತ್ತು. ಹೀಗಾಗಿ ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ತಡೆಯಾಜ್ಞೆ ಮುಂದುವರೆಸುವಂತೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ದ್ವಿಸದಸ್ಯ ನ್ಯಾಯಪೀಠವು, ಹೈಕೋರ್ಟ್ ತೀರ್ಪಿಗೆ ನೀಡಿದ್ದ ತಡೆಯನ್ನು ವಿಸ್ತರಿಸಿ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!