ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್‌: ಬಳ್ಳಾರಿಗೆ ಹೋಗಲು ಸಿಕ್ಕಿತು ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ಬಿಗ್ ರಿಲೀಫ್‌ ನೀಡಿದ್ದು,ಬಳ್ಳಾರಿಗೆ ಹೋಗಲು ಸೋಮವಾರ ಅನುಮತಿ ನೀಡಿದೆ. ಈ ಮೂಲಕ ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಗಾಲಿ ಜನಾರ್ಧನ ರೆಡ್ಡಿ ತಮ್ಮ ಮಗಳನ್ನು ಭೇಟಿ ಮಾಡಲು ಅವಕಾಶ ಸಿಕ್ಕಿದೆ.
ನವೆಂಬರ್ 6 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿರಲು ಒಪ್ಪಿಗೆ ಸೂಚಿಸಿದೆ.

ಇದೇ ವೇಳೆ ನವೆಂಬರ್ 9, 2022 ರಿಂದ ಪ್ರತಿನಿತ್ಯ ವಿಚಾರಣೆ ನಡೆಸಿ 6 ತಿಂಗಳೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ಎಂದು ಆಂಧ್ರ ಪ್ರದೇಶದ ನಾಂಪಲ್ಲಿ ವಿಶೇಷ ಕೋರ್ಟ್‌ ನ್ಯಾಯಮೂರ್ತಿ .ಎಂ. ಆರ್. ಶಾ ಹಾಗೂ ನ್ಯಯಮೂರ್ತಿ.ಕೃಷ್ಣಾ ಮುರಾರಿ ಒಳಗೊಂಡ ದ್ವಿ ಸದಸ್ಯ ಪೀಠ ಆದೇಶ ನೀಡಿದೆ. ಈ ವೇಳೆ ಜನಾರ್ಧನ ರೆಡ್ಡಿ ಬಳ್ಳಾರಿ, ಅನಂತಪುರ ಹೋಗುವಂತಿಲ್ಲ ಎಂದೂ ಸೂಚನೆ ನೀಡಿದ್ದಾರೆ.

ಬಹುಕೋಟಿ ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಗಾಲಿ ಜನಾರ್ಧನ ರೆಡ್ಡಿ ಜೈಲು ಶಿಕ್ಷೆ ಅನುಭವಿಸಿದ್ದು, ಬಳಿಕ 2015 ರಿಂದ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೆ ಅವರಿಗೆ ಕರ್ನಾಟಕದ ಬಳ್ಳಾರಿಗೆ ಹಾಗೂ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪಕ್ಕೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಿತ್ತು. ಇದೀಗ ತನ್ನ ಮಗಳು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಹಿನ್ನೆಲೆ ಬಳ್ಳಾರಿಗೆ ಭೇಟಿ ನೀಡಲು ಅನುಮತಿ ನೀಡಬೇಕೆಂದು ಜನಾರ್ಧನ ರೆಡ್ಡಿ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಕೋರ್ಟ್ ಅನುಮತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!