ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ನಾಲ್ಕು ಕೇಸ್ ಕ್ಲೋಸ್ ಮಾಡಿ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು,ಕಳೆದ ವರ್ಷ ಐಟಿ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣಗಳ ತನಿಖೆ ರದ್ದುಗೊಳಿಸಿ ಕೋರ್ಟ್ ಆದೇಶ ನೀಡಿದೆ.
ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಕೇಸ್ ಕ್ಲೋಸ್ ಮಾಡಿದ್ದಾರೆ. ಸಿಸಿಹೆಚ್ 47 ನೇ ನ್ಯಾಯಾಧೀಶೆ ಈ ಚಂದ್ರಕಲಾ ಆದೇಶ ಹೊರಡಿಸಿದ್ದಾರೆ.
ಗಣಪತಿ ಡೀಲ್ಕಾಮ್ PVT LTD V.S ಕೇಂದ್ರ ಸರ್ಕಾರದ ಕೇಸ್, 2016 ರ ಬೇನಾಮಿ ವ್ಯವಹಾರ ನಿರ್ಬಂಧ ಕಾಯ್ದೆಯಡಿ ಕೇಸ್ ಹಾಗೂ 2021 ರ ಮೇ 28 ನೇ ತಾರೀಖಿನಂದು ನಾಲ್ಕು ಕೇಸ್ ದಾಖಲಾಗಿತ್ತು. 2009 ರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಐಟಿ ಅಧಿಕಾರಿಗಳು ಆರೋಪಿಸಿ ಕೇಸ್ ದಾಖಲಿಸಿದ್ದರು. ಇದೀಗ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಾಲ್ಕು ಪ್ರಕರಣಗಳಿಂದ ರೆಡ್ಡಿಗೆ ಮುಕ್ತಿ ಸಿಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!