March 23, 2026
Monday, March 23, 2026
spot_img

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್‌, ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡರ್‌ ಕೊಲೆ ಪ್ರಕರಣದಲ್ಲಿ ಕೊನೆಗೂ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಪ್ರಕರಣದ ಪ್ರಮುಖ ಆರೋಪಿಯೂ ಆಗಿರುವ ಶಾಸಕರಿಗೆ ಸುಪ್ರೀಂ ಕೋರ್ಟ್‌ನ ನ್ಯಾ. ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ವಿನಯ್ ಕುಲಕರ್ಣಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದಾರ್ಥ್‌ ಲೂಥ್ರಾ, ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡಿದೆ. ಈ ಹಂತದಲ್ಲಿ ಸಾಕ್ಷ್ಯ ನಾಶವಾಗಲಿ ಅಥವಾ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಪ್ರಕರಣ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿದೆ. ವಿನಯ್ ಕುಲಕರ್ಣಿ ಅವರಿಗೆ ಜಾಮೀನು ನೀಡಿದ್ರೆ ಸಮಸ್ಯೆ ಇಲ್ಲ ಎಂದು ವಾದ ಮಂಡಿಸಿದರು.

ಯೋಗೀಶ್‌ಗೌಡರ್‌ ಅವರನ್ನ 2016 ರ ಜೂನ್‌ 15 ರಂದು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರ ಬಳಿಕ ಸಿಬಿಐ ಕೈಗೆತ್ತಿಕೊಂಡು ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಆರೋಪಿಯನ್ನಾಗಿ ಪರಿಗಣಿಸಿ ಬಂಧಿಸಿತ್ತು. ಸುಪ್ರೀಂ ಕೋರ್ಟ್‌ ಈ ಹಿಂದೆ ಜಾಮೀನು ರದ್ದುಪಡಿಸಿದ ಬಳಿಕ 2025ರ ಜೂನ್‌ 13 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದರು. ಇದೀಗ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು, ಬಿಡುಗಡೆಯ ಭಾಗ್ಯ ಸಿಕ್ಕಂತಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !