ಹೊಸದಿಗಂತ ಡಿಜಿಟಲ್ ಡೆಸ್ಕ್:
ನೂಪುರ್ ಶರ್ಮಾ ವಿರುದ್ಧ ದೇಶದ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಲ್ಲಾ ಕೇಸ್ಗಳನ್ನು ಒಂದೇ ಕಡೆ ನಡೆಸುವಂತೆ ಮಾಡಿಕೊಂಡ ಮನವಿಯನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
ದೇಶದ ಹಲವು ಭಾಗಗಳಲ್ಲಿ ಇವರ ವಿರುದ್ಧ ದೂರು ದಾಖಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ವಿವಿಧ ಕೋರ್ಟ್ಗಳಲ್ಲಿ ವಿಚಾರಣೆ ನಡೆಯುತ್ತಿದೆ. ಎಲ್ಲೆಡೆ ತಾವು ಹೋಗುವುದು ಕಷ್ಟಸಾಧ್ಯವಾಗುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಒಂದೇ ಕಡೆ ನಡೆಸಲು ಅನುಮತಿ ನೀಡಬೇಕು ಎಂದು ನೂಪುರ್ ಶರ್ಮಾ ಮಾಡಿಕೊಂಡ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ.
ಇದೇ ವೇಳೆ ನೂಪುರ್ ಶರ್ಮಾ ಗೆ ಜೀವ ಬೆದರಿಕೆ ಬಂದಿರುವ ಅಂಶವನ್ನೂ ಪರಿಗಣಿಸಿರುವ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆಬಿ ಪರ್ದಿವಾಲಾ ಅವರ ಪೀಠ, ಒಂದೇ ಕಡೆ ನಡೆಸಲು ಅನುಮತಿ ನೀಡಿದೆ. ಈ ಮೂಲಕ ನೂಪುರ್ ನಿಟ್ಟುಸಿರು ಬಿಡುವಂತಾಗಿದೆ.
ದೆಹಲಿ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಕರ್ನಾಟಕ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಅಸ್ಸಾಂ ರಾಜ್ಯಗಳಲ್ಲಿ ನೂಪುರ್ ವಿರುದ್ಧ ಕೇಸ್ ದಾಖಲಾಗಿದೆ. ಈ ಎಲ್ಲಾ ಕೇಸ್ಗಳನ್ನು ದೆಹಲಿ ಒಂದಕ್ಕೇ ವರ್ಗಾವಣೆ ಮಾಡಿ ಅಲ್ಲಿಯೇ ವಿಚಾರಣೆ ನಡೆಸುವಂತೆ ಪೀಠ ಹೇಳಿದೆ.