January22, 2026
Thursday, January 22, 2026
spot_img

ಸುಪ್ರೀಂನಿಂದ ಆರ್‌.ಅಶೋಕ್‌ಗೆ ‘ಬಿಗ್‌ ರಿಲೀಫ್‌’: ‘ರಾಜಕೀಯ ಪ್ರೇರಿತ’ FIR ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಗರ್‌ ಹುಕುಂ ಜಮೀನು ಹಂಚಿಕೆಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರಿಗೆ ಸುಪ್ರೀಂ ಕೋರ್ಟ್‌ ಮಹತ್ವದ ಪರಿಹಾರ ನೀಡಿದೆ. ಅಶೋಕ್‌ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿದ್ದ ಪ್ರಥಮ ವರ್ತಮಾನ ವರದಿ ಅನ್ನು ಸರ್ವೋಚ್ಚ ನ್ಯಾಯಾಲಯವು ರದ್ದುಪಡಿಸಿದೆ.

ನ್ಯಾಯಮೂರ್ತಿ ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠವು ಈ ತೀರ್ಪನ್ನು ನೀಡಿದ್ದು, ಎಫ್‌ಐಆರ್‌ ಕುರಿತು ಬಲವಾದ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಪ್ರಕರಣದ ಎಫ್‌ಐಆರ್ ಅನ್ನು ‘ರಾಜಕೀಯ ಪ್ರೇರಿತ’ ಎಂದು ನ್ಯಾಯಪೀಠವು ತನ್ನ ತೀರ್ಪಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ.

ಆರ್‌. ಅಶೋಕ್‌ ಅವರು ಬಗರ್‌ ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ, ಅನರ್ಹರಿಗೆ ಅಕ್ರಮವಾಗಿ ಜಮೀನು ಹಂಚಿಕೆ ಮಾಡಿದ್ದಾರೆ ಎಂದು 2018ರಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರವು ಗಂಭೀರ ಆರೋಪ ಮಾಡಿತ್ತು. ಈ ಆರೋಪಗಳ ಆಧಾರದ ಮೇಲೆ, ಆಗಿನ ಎಸಿಬಿಯಲ್ಲಿ ಅಶೋಕ್‌ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಇದೀಗ, ಸುದೀರ್ಘ ಕಾನೂನು ಹೋರಾಟದ ನಂತರ, ಸುಪ್ರೀಂ ಕೋರ್ಟ್‌ ಎಸಿಬಿ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಪಡಿಸುವ ಮೂಲಕ ವಿಪಕ್ಷ ನಾಯಕರಿಗೆ ದೊಡ್ಡ ಮಟ್ಟದ ಕಾನೂನು ಗೆಲುವನ್ನು ತಂದುಕೊಟ್ಟಿದೆ.

Must Read