ಕೇಂದ್ರ ಸಚಿವ ಅನುರಾಗ್ ಠಾಕೂರ್ ಗೆ ಬಿಗ್ ರಿಲೀಫ್: ಎಫ್‌ಐಆರ್ ಅರ್ಜಿ ವಜಾಗೊಳಿಸಿದ ಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಬಿಜೆಪಿ ಸಂಸದ ಪ್ರವೇಶ್ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ವಜಾಗೊಳಿಸಿದೆ.
ಈ ಮೂಲಕ ಪ್ರಕರಣದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೋರ್ ಗೆ ಬಿಗ್ ರಿಲೀಫ್ ಸಿಕ್ಕಿದೆ.
ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ವಿರೋಧಿ ಪ್ರತಿಭಟನೆಯ ಸಮಯದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಬಿಜೆಪಿ ಸಂಸದ ಪ್ರವೇಶ್ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.
ಇದೀಗ ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ಅವರು ಅರ್ಜಿದಾರರಿಗೆ ಪರ್ಯಾಯ ಪರಿಹಾರಗಳು ಲಭ್ಯವಿದೆ ಎಂದು ಹೇಳಿದರು.ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ, ಸಾರ್ವಜನಿಕ ಕಾರ್ಯಕರ್ತರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಅಗತ್ಯ ಎಂದು ನ್ಯಾಯಾಲಯ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!