BIG SHOCKING NEWS | ಹೃದಯಾಘಾತ: ಸಚಿವ ಉಮೇಶ್ ಕತ್ತಿ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ಬೆಂಗಳೂರಿನ ಡಾಲರ್‍ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಉಮೇಶ್ ಕತ್ತಿ ನಿಧನರಾಗಿದ್ದಾರೆ.
61 ವರ್ಷ ವಯಸ್ಸಿನ ಉಮೇಶ್ ಕತ್ತಿ ಅವರು ರಾತ್ರಿ 10.30ರ ಸುಮಾರಿಗೆ ತಮ್ಮ ಮನೆಯಲ್ಲಿ ಕುಸಿದುಬಿದ್ದಿದ್ದರು. ಬುಧವಾರ ಬೆಳಿಗ್ಗೆ ಬೆಂಗಳುರಿನಲ್ಲಿ ಕತ್ತಿ ಅವರ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗುತ್ತಿದೆ. ಬೆಳಗಾವಿಯ ಬೆಲ್ಲದಬಾಗೇವಾಡಿಯಲ್ಲಿ ಕತ್ತಿಯವರ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!