ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ.
ಈಗಾಗಲೇ ಟ್ರೋಫಿ ಹಿಡಿದು ಕಾರ್ತಿಕ್ ಎಲ್ಲಾ ಕಡೆ ತೆರಳಿ ಅಭಿಮಾನಿಗಳನ್ನು ಭೇಟಿಯಾಗುತ್ತಿದ್ದಾರೆ. ಇಂದು ಸಿಎಂ ನಿವಾಸಕ್ಕೆ ಭೇಟಿ ನೀಡಿ, ಮಾತನಾಡಿದ್ದಾರೆ.
ಸಿಎಂ ಇನ್ನಷ್ಟು ಮನರಂಜನಾ ಕಾರ್ಯಕ್ರಮ, ಸಿನಿಮಾಗಳನ್ನು ನೀಡಿ, ಒಳ್ಳೆಯದಾಗಲು ಎಂದು ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕಾರ್ತಿಕ್ ಫ್ಯಾನ್ಸ್ ಫೋಟೊಗಳನ್ನು ಹಂಚಿಕೊಂಡು ಖುಷಿಪಟ್ಟಿದ್ದಾರೆ.