ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಕ್ಕೆ ಆಗಮಿಸಿದ ಜೆ.ಪಿ ನಡ್ಡಾಗೆ ಟ್ರಾಫಿಕ್ ಬಿಸಿ ತಟ್ಟಿದ್ದು, ಈ ಹಿನ್ನೆಲೆಯಲ್ಲಿ ರೋಡ್ ಶೋ ರದ್ದಾಗಿದೆ. ಹೆಚ್. ಎಲ್ ಏರ್ಪೋರ್ಟ್ ನಿಂದ ಕೆ ಆರ್ ಪುರಂ ಗೆ ರಸ್ತೆ ಮಾರ್ಗವಾಗಿ ಆಗಮಿಸುತ್ತಿದ್ದಾಗ ನಡ್ಡಾ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದಾರೆ.
ಟ್ರಾಫಿಕ್ ಜಾಮ್ ಹಿನ್ನೆಲೆ ಸಮಯವಾಗಿದ್ದರಿಂದ ರೋಡ್ ಶೋ ರದ್ದು ಮಾಡಲಾಗಿದ್ದು, ನೇರವಾಗಿ ನಡ್ಡಾ ಬಿಜೆಪಿ ಸಮಾವೇಶಕ್ಕೆ ಆಗಮಿಸಿದ್ದಾರೆ. ಕೆ.ಆರ್.ಪುರಂನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಸಾರ್ವಜನಿಕ ಪ್ರಚಾರ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.