ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಹಲವು ರಾಜ್ಯಗಳಲ್ಲಿ ವರುಣ ಸದ್ದಿಲ್ಲದೇ ತನ್ನ ರೌದ್ರಾವತಾರ ಶುರುಮಾಡಿದ್ದು, ಬಿಹಾರದಲ್ಲಿ ನಿನ್ನೆಒಂದು ದಿನ ಸುರಿದ ಸಿಡಿಲು ಸಹಿತ ಆಲಿಕಲ್ಲು ಮಳೆಯಿಂದಾಗಿ ಕನಿಷ್ಠ 25 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಕಚೇರಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ನಳಂದನಲ್ಲಿ 18 ಮಂದಿ ಮೃತಪಟ್ಟಿದ್ದಾರೆ. ಸಿವಾನ್ನಲ್ಲಿ ಇಬ್ಬರು, ಕತಿಹಾರ್, ದರ್ಭಂಗಾ, ಬೇಗುಸರಾಯ್, ಭಾಗಲ್ಪುರ್ ಮತ್ತು ಜೆಹಾನಾಬಾದ್ನಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ತಿಳಿಸಿದೆ.
ಬುಧವಾರ ಬಿಹಾರದ 4 ಜಿಲ್ಲೆಗಳಲ್ಲಿ ಸಿಡಿಲು ಬಡಿದು 13 ಜನರು ಮೃತಪಟ್ಟಿದ್ದಾರೆ. ಮೃತರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ.
ನಳಂದಾ, ನಾವಡಾ, ಮಧುಬನಿ, ದರ್ಭಾಂಗ, ಪೂರ್ವ ಚಂಪಾರಣ್, ಗೋಪಾಲ್ಗಂಜ್, ಪಶ್ಚಿಮ ಚಂಪಾರಣ್, ಸೇರಿದಂತೆ ಪಟ್ನಾದ ಕೆಲವು ಸ್ಥಳಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.