ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಜುಲೈ 25ರಂದು ನಡೆದ ಹಿಂಸಾತ್ಮಕ ಪ್ರತಿಭಟನೆ ವೇಳೆ ಬಿಹಾರ ಬ್ಲಾಕ್ ಅಭಿವೃದ್ಧಿ ಅಧಿಕಾರಿ ರಿತೇಶ್ ಕುಮಾರ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿತೇಶ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಬಿಹಾರದ ಛಪ್ರಾದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಛಪ್ರಾದ ಬ್ಲಾಕ್ ಅಭಿವೃದ್ಧಿ ಅಧಿಕಾರಿ ರಿತೇಶ್ ಕುಮಾರ್ ಅವರ ತಲೆಗೆ ಕಬ್ಬಿಣದ ಬ್ಲಾಕ್ ತೂಕದ ಬ್ಯಾಟ್ ನಿಂದ ಹೊಡೆಯಲಾಗಿದೆ. ತಕ್ಷಣವೇ ತೀವ್ರವಾಗಿ ರಕ್ತ ಹರಿದಿದ್ದು, ರಸ್ತೆಗೆ ಕುಸಿದು ಬಿದ್ದಿದ್ದಾರೆ. ಘರ್ಷಣೆ ಮುಂದುವರಿದಿದ್ದರಿಂದ ಅವರನ್ನು ಅಧಿಕಾರಿಗಳು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು. ಛಾಪ್ರಾ ನಗರದಲ್ಲಿ ಜುಲೈ 25ರಂದು ಸಾವಿರಾರು ಪ್ರತಿಭಟನಾಕಾರರು ಸೇರಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗಳ ಮೇಲೆ ಕೂಡ ದಾಳಿ ನಡೆಸಿದ್ದಾರೆ. ಸರ್ಕಾರಿ ವಾಹನಗಳು, ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಭಾರಿ ಪ್ರಮಾಣದಲ್ಲಿ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸೇರಿದ್ದು, ಅವರ ಮೇಲೂ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ.
ಸಂಜೆ 4 ಗಂಟೆ ಸುಮಾರಿಗೆ ಹಿಂಸಾಚಾರ ತೀವ್ರಗೊಂಡಿದ್ದು, ರಿತೇಶ್ ಸಿಂಗ್ ಅವರು ಬಿಹಾರ ಪೊಲೀಸ್ ಮತ್ತು ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿಯೊಂದಿಗೆ ಕರ್ತವ್ಯದಲ್ಲಿದ್ದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರ ಗುಂಪೊಂದು ಕಲ್ಲು ತೂರಾಟವನ್ನು ಪ್ರಾರಂಭಿಸಿದ್ದು, ಇದರಿಂದ ಪೊಲೀಸರು ಮತ್ತು ಐಟಿಬಿಪಿ ಸಿಬ್ಬಂದಿ ಹಿಮ್ಮೆಟ್ಟಬೇಕಾಯಿತು. ಆಗ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದ ರಿತೇಶ್ ಸಿಂಗ್ ಮೇಲೆ ಭಾರಿ ಪ್ರಮಾಣ ಕಬ್ಬಿಣದ ಬ್ಲಾಕ್ ತೂಕದ ಬ್ಯಾಟ್ ನಿಂದ ಹೊಡೆಯಲಾಗಿದೆ. ಅವರು ಯಾವುದೇ ರೀತಿಯ ಹೆಲ್ಮೆಟ್ ಅಥವಾ ರಕ್ಷಾಕವಚವನ್ನು ಧರಿಸದೇ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಪೊಲೀಸರು ಅವರು ಬಿದ್ದಿದ್ದ ಸ್ಥಳದಲ್ಲಿದ್ದ ಎರಕಹೊಯ್ದ ಕಬ್ಬಿಣದ ಬ್ಲಾಕ್ ತೂಕದ ಬ್ಯಾಟ್ ಅನ್ನು ವಶಕ್ಕೆ ಪಡೆದಿದ್ದಾರೆ. ಹಿಂಸಾಚಾರದ ಸಮಯದಲ್ಲಿ ಇದರಿಂದ ಅವರ ಮೇಲೆ ದಾಳಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



