ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹೆಲಿಕಾಪ್ಟರ್ ಗಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ರಾಜ್ಯದ ಬರ ಪರಿಸ್ಥಿತಿಯನ್ನು ಸಮೀಕ್ಷೆ ಮಾಡಲು ಸಿಎಂ ತೆರಳಿದರು ಎನ್ನಲಾಗಿದ್ದು, ಈ ವೇಳೆ ಹವಾಮಾನ ವೈಪರೀತ್ಯದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ.
ಪಟ್ನಾದಲ್ಲಿ ಮಳೆಯಾಗುತ್ತಿದ್ದರಿಂದ ಸಿಎಂ ಅವರ ಹೆಲಿಕಾಪ್ಟರ್ಗೆ ಹಿಂತಿರುಗುವಾಗ ಮೋಡ ಕವಿದಿದೆ. ಹಾಗಾಗಿ ಗಯಾಕ್ಕೆ ತಿರುಗಿಸಿದ್ದೇವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಹಾರದ ಹಲವಾರು ಭಾಗಗಳು ಅಲ್ಪ ಪ್ರಮಾಣದ ಮಳೆಯಿಂದಾಗಿ ಬರಗಾಲದಂತಹ ಪರಿಸ್ಥಿತಿಯನ್ನು ಎದುರಿಸುತ್ತಿವೆ.