Friday, November 21, 2025

ಬಿಹಾರ ಚುನಾವಣೆ: ಪ್ರಚಾರದ ಅಖಾಡಕ್ಕೆ ಇಳಿದ ಮುಖ್ಯಮಂತ್ರಿ ನಿತೀಶ್ ಕುಮಾರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾಖಲೆಯ 5ನೇ ಅವಧಿಗೆ ಅಧಿಕಾರ ಹಿಡಿಯಲು ಎದುರು ನೋಡುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಚಾರದ ಅಖಾಡಕ್ಕೆ ಇಳಿದಿದ್ದು, ತಮ್ಮ ಬದ್ಧ ವೈರಿ ಲಾಲು ಪ್ರಸಾದ್ ಯಾದವ್ ವಿರುದ್ಧ ಕಟು ವಾಗ್ದಾಳಿ ನಡೆಸಿದರು.

ಲಾಲು ಅಧಿಕಾರದಲ್ಲಿದ್ದಾಗ ‘ಮಹಿಳೆಯರಿಗಾಗಿ ಏನನ್ನೂ ಮಾಡಲಿಲ್ಲ’ ಮತ್ತು ಮೇವು ಹಗರಣದಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಬೇಕಾದಾಗ ತಮ್ಮ ಪತ್ನಿ ರಾಬ್ರಿ ದೇವಿ ಅವರನ್ನು ಖುರ್ಚಿಯಲ್ಲಿ ಕೂರಿಸಿದರು ಎಂದು ಆರೋಪಿಸಿದ್ದಾರೆ.

ಮುಜಾಫರ್‌ಪುರ ಜಿಲ್ಲೆಯ ಮೀನಾಪುರ ಕ್ಷೇತ್ರದಲ್ಲಿ ಚೊಚ್ಚಲ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಎರಡು ಅಲ್ಪಾವಧಿಯ ಮೈತ್ರಿಗಳ ನಂತರ ಲಾಲು ಪ್ರಸಾದ್ ನೇತೃತ್ವದ ಆರ್‌ಜೆಡಿಯ ಬಗ್ಗೆ ಭ್ರಮನಿರಸನಗೊಂಡಿರುವುದಾಗಿ ಮತ್ತು ಎನ್‌ಡಿಎಯೊಂದಿಗೆ ಉಳಿಯುವುದಾಗಿ ಪ್ರತಿಜ್ಞೆ ಮಾಡಿರುವುದಾಗಿ ಹೇಳಿದರು.

ಮಹಿಳಾ ಸಬಲೀಕರಣದಲ್ಲಿ ತಮ್ಮ ಸರ್ಕಾರವು ದೊಡ್ಡ ಪ್ರಮಾಣದಲ್ಲಿ ಸ್ವಸಹಾಯ ಗುಂಪುಗಳ ರಚನೆ ಮತ್ತು ಇತ್ತೀಚೆಗೆ ಪ್ರಾರಂಭಿಸಲಾದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯ ಭಾಗವಾಗಿ ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳ ಖಾತೆಗಳಿಗೆ ತಲಾ 10,000 ರೂ.ಗಳನ್ನು ವರ್ಗಾಯಿಸಲಾಗಿದೆ ಎಂದು ಹೇಳಿದರು.

error: Content is protected !!