ಚುನಾವಣಾ ಬಿಸಿಯಲ್ಲಿ ಬಿಹಾರ: ಈ ಬಾರಿ ಲೋಕಾ ಅಖಾಡಕ್ಕೆ ಲಾಲೂ ಪುತ್ರಿ ರೋಹಿಣಿ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತಗೊಂಡಿದೆ.

ಆರ್‌ಜೆಡಿ ಇದುವರೆಗೂ ತನ್ನ ಅಭ್ಯರ್ಥಿಗಳನ್ನು ಘೋಷಿಸಿಲ್ಲವಾದರೂ, ರೋಹಿಣಿಯವರನ್ನು ಕಣಕ್ಕಿಳಿಸುವ ಕುರಿತು ಚರ್ಚೆಗಳು ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆರ್‌ಜೆಡಿ ರಾಜ್ಯಾಧ್ಯಕ್ಷ ಜಗದಾನಂದ್ ಸಿಂಗ್ ಅವರ ಪುತ್ರ ಸುಧಾಕರ್ ಸಿಂಗ್ ಅವರು ಬಕ್ಸರ್ ಕ್ಷೇತ್ರದಿಂದ, ಕೃಷಿ ಸಚಿವರಾಗಿದ್ದ ಕುಮಾರ್ ಸರ್ವಜೀತ್ ಅವರಿಗೆ ಗಯಾ ಕ್ಷೇತ್ರದಿಂದ ಸ್ಪರ್ಧೆಯ ಅವಕಾಶ ಸಿಗಬಹುದು ಎಂಬ ಬಗ್ಗೆಯೂ ಚರ್ಚೆಗಳು ನಡೆದಿವೆ. ಜೊತೆಗೆ ಅಲೋಕ್ ಮೆಹ್ತಾ ಅವರಿಗೆ ಉಜಿಯಾರ್‌ಪುರ ಸ್ಥಾನವನ್ನೂ ನೀಡಬಹುದು ಎಂದೂ ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!