July 21, 2026
Tuesday, July 21, 2026
spot_img

ಇತ್ತ ರೈಲಿನಲ್ಲಿ ಸೀಟಿಗಾಗಿ ಬಿಹಾರ ಯುವಜನತೆ ಪರದಾಟ…ಅತ್ತ ಗುಜರಾತಿಗೆ ಬುಲೆಟ್ ಟ್ರೈನ್: ಪ್ರಶಾಂತ್ ಕಿಶೋರ್ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ಚುನಾವಣೆಗೆ ಭರ್ಜರಿ ಪ್ರಚಾರ ಶುರುವಾಗಿದ್ದು, ಗೆಲುವಿಗಾಗಿ ರಾಜಕೀಯ ವಾಗ್ದಾಳಿ ಶುರುವಾಗಿದೆ. ಇದೀಗ ಸಿಎಂ ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಜನ ಸುರಾಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಚಾತ್ ಹಬ್ಬಕ್ಕೆ ಸ್ವಗ್ರಾಮಕ್ಕೆ ಮರಳಲು ಬಿಹಾರದ ಯುವಜನತೆ ಪರದಾಡುತ್ತಿದ್ದರೆ, ಗುಜರಾತಿನಲ್ಲಿ ಬುಲೆಟ್ ರೈಲು ನಿರ್ಮಾಣ ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕಿಶೋರ್, ಇದು ಜನ ಸೂರಜ್ ಜನ್ಮ ಭೂಮಿ, ಇಲ್ಲಿಂದಲೇ ಮೂರುವರೆ ವರ್ಷಗಳ ಹಿಂದೆ ಪಕ್ಷ ಅಸ್ತಿತ್ವಕ್ಕೆ ಬಂದಿದೆ. ಬಿಹಾರದ ಜನರ ರಾಜಕೀಯ ಗುಲಾಮಗಿರಿಯನ್ನು ಕೊನೆಗೊಳಿಸುತ್ತೇವೆ. ಇಲ್ಲಿನ ಜನ ಲಾಲುಗೆ ಹೆದರಿ ಬಿಜೆಪಿಗೆ ಮತ ಹಾಕುತ್ತಿದ್ದರು. ಇಲ್ಲ ಬಿಜೆಪಿಗೆ ಹೆದರಿ ಲಾಲುಗೆ ಮತ ಹಾಕುತ್ತಿದ್ದರು. ಈಗಿರುವ ವ್ಯವಸ್ಥೆಯನ್ನು ಮುಂದುವರಿಸಬೇಕೇ ಅಥವಾ ಬದಲಾವಣೆಯನ್ನು ತರಬೇಕೇ ಎಂಬುದನ್ನು ಮುಂದಿನ 10-15 ದಿನಗಳಲ್ಲಿ ಜನ ನಿರ್ಧರಿಸಬೇಕು ಎಂದರು.

ಗುಜರಾತ್‌ನಲ್ಲಿ 1 ಲಕ್ಷ ಕೋಟಿ ರೂ. ಮೌಲ್ಯದ ಬುಲೆಟ್ ರೈಲು ನಿರ್ಮಿಸಲಾಗುತ್ತಿದೆ. ಆದರೆ ಬಿಹಾರದ ಯುವಕರು ಚಾತ್ ಗಾಗಿ ಮನೆಗೆ ಬರಲು ರೈಲಿನಲ್ಲಿ ಸೀಟು ಪಡೆಯಲು ಹೆಣಗಾಡುತ್ತಿದ್ದಾರೆ ಎಂದು ಟೀಕಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !