ಹೊಸದಿಗಂತ ವರದಿ ಮಡಿಕೇರಿ:
ಬೈಕ್ ಮತ್ತು ಆಂಬ್ಯುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವಿಗೀಡಾದ ಘಟನೆ ಇಲ್ಲಿಗೆ ಸಮೀಪದ ಕತ್ತಲೆಕಾಡು ಎಂಬಲ್ಲಿ ನಡೆದಿದೆ.
ಚೆಟ್ಟಳ್ಳಿಯ ಕಾಫಿ ಬೋರ್ಡ್ ಉದ್ಯೋಗಿ ಲೋಕೇಶ್(43) ಮೃತ ದುರ್ದೈವಿ. ಲೋಕೇಶ್ ಅವರು ಮಡಿಕೇರಿಯಿಂದ ಚೆಟ್ಟಳ್ಳಿಗೆ ಬೈಕ್’ನಲ್ಲಿ ತೆರಳುತ್ತಿದ್ದ ಸಂದರ್ಭ, ಚೆಟ್ಟಳ್ಳಿ ಕಡೆಯಿಂದ ಮಡಿಕೇರಿಗೆ ಆಗಮಿಸುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿಯಾಯಿತೆನ್ನಲಾಗಿದೆ.
ಈ ಸಂದರ್ಭ ಲೋಕೇಶ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಡಿಕೇರಿಯ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.