ಹೊಸದಿಗಂತ ವರದಿ,ಮೈಸೂರು:
ಬ್ಯಾರಿಕೇಡ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ನೂರಲಕುಪ್ಪೆ ಗ್ರಾಮದ ನಿವಾಸಿ ಚರಣ್ ಮತ್ತು ಎಂ.ಎನ್.ಹರ್ಷ ಮೃತರು. ಇವರು ನಗರದ ಜೆಸಿ ಕಾಲೇಜಿನಿಂದ ಪ್ರೀಮಿಯರ್ ಸ್ಟುಡಿಯೋ ಕಡೆಗೆ ಬೈಕ್ನಲ್ಲಿ ವೇಗವಾಗಿ ಬರುತ್ತಿದ್ದ ವೇಳೆ ನಿಯಂತ್ರಣ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿದ್ದು, ಬಿದ್ದು ತೀವ್ರವಾಗಿ ಗಾಯಗೊಂಡು ಸಾವಿಗೀಡಾಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ಮಾಡಿದ ವಿ.ವಿ ಪುರಂ ಸಂಚಾರ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.