ಡಿವೈಡರ್ ಗೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು

ಹೊಸದಿಗಂತ ವರದಿ,ಉಡುಪಿ:

ಚಲಿಸುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕದ ಪಕ್ಕದಲ್ಲಿರುವ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬೈಂದೂರಿನ ರಾಷ್ಟ್ರೀಯ ಹೆದ್ದಾರಿ ಕಂಬದಕೋಣೆ ಸೇತುವೆ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಮೃತ ವಿದ್ಯಾರ್ಥಿಗಳು ಆಂಧ್ರಪ್ರದೇಶ ಮೂಲದ ಕಲ್ಲೂರು ತರುಣ್ ಕುಮಾರ್ ರೆಡ್ಡಿ (19) ಹಾಗೂ ಆದಿತ್ಯ ರೆಡ್ಡಿ (18) ಎಂದು ಗುರುತಿಸಲಾಗಿದೆ.
ಭಾನುವಾರ ಬೆಳಗ್ಗೆ ಮಣಿಪಾಲದಿಂದ ಮುರುಡೇಶ್ವರಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಬೈಂದೂರು ಪಿ.ಎಸ್.ಐ ಪವನ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!