ಸರ್ಕಾರಿ ಬಸ್​ಗೆ ಬೈಕ್​ ಡಿಕ್ಕಿ: ಗ್ರಾಮ ಪಂಚಾಯತ್​ ಸದಸ್ಯ ಸೇರಿ ಇಬ್ಬರು ಸ್ಥಳದಲ್ಲೇ ಸಾವು

ಹೊಸದಿಗಂತ , ಬೀದರ್:

ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಹೊರವಲಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದು, ಅಪಘಾತದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಇನ್ನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ವೀರೇಶ್ ಲೋಹರೆ (35) ಮತ್ತು ಅಭಿಷೇಕ್ ದಬಾಲೆ (26) ಮೃತಪಟ್ಟವರು. ಇವರಿಬ್ಬರು ಚಾಂಡೇಶ್ವರ ಗ್ರಾಮದವರಾಗಿದ್ದು, ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿರೇಶ ಲೊಹಾರೆ ಡಿಗ್ಗಿ ಗ್ರಾಮ ಪಂಚಾಯತ್‌ನಲ್ಲಿ ಸದಸ್ಯನಾಗಿದ್ದರು. ಆದರೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಕಮಲನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!