SHOCKING NEWS | ಓವರ್ ಟೇಕ್ ಭರದಲ್ಲಿ ಲಾರಿಗೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ, ಉಡುಪಿ:

ಲಾರಿಯೊಂದನ್ನು ಓವರ್ ಟೇಕ್ ಮಾಡುವಾಗ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಮಂಜುನಾಥ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಸಾಲಿಗ್ರಾಮ ಸಮೀಪದ ಸಮಿತ್ ಕುಮಾರ್ ಎಮ್ ಜಿ (19) ಮತ್ತು ವಾಗೀಶ್ ಕೆದ್ಲಾಯ (19) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಗಳು ಉಡುಪಿಯಲ್ಲಿ ಖಾಸಗಿ ಸಂಧ್ಯಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಮಂಗಳವಾರ ಸಂಜೆ 7.30 ರ ಸುಮಾರಿಗೆ ಉಡುಪಿಯಿಂದ ಕಾಲೇಜು ಮುಗಿಸಿ ಬೈಕಿನಲ್ಲಿ ವಾಪಾಸಾಗುತ್ತಿದ್ದ ವೇಳೆ ಟ್ರಕ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಟ್ರಕ್ಕಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿದ್ದು ರಸ್ತೆಗೆ ಅಪ್ಪಳಿಸಿದ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎನ್ನಲಾಗಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!