ಟ್ರಾಕ್ಟರ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ಸವಾರ ಸಾವು

ಹೊಸದಿಗಂತ ವರದಿ, ನಾಗಮಂಗಲ :

ಚಲಿಸುತ್ತಿದ್ದ ಟ್ರಾಕ್ಟರ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ತೊಳಲಿ ಗ್ರಾಮದ ಬಳಿ ರಾತ್ರಿ ಸಂಭವಿಸಿದೆ.

ತಾಲೂಕಿನ ಮುಳಕಟ್ಟೆ ಗ್ರಾಮದ ಲೇಟ್ ಶಿವಣ್ಣ ಎಂಬುವರ ಪುತ್ರ ಮಹೇಶ್(36) ಘಟನೆಯಲ್ಲಿ ಸಾವನ್ನಪ್ಪಿರುವ ನತದೃಷ್ಟ ವ್ಯಕ್ತಿ.
ಕಾರ್ಯನಿಮಿತ್ತ ಬೆಳ್ಳೂರು ಕ್ರಾಸ್‌ಗೆ ತೆರಳಿದ್ದ ಮಹೇಶ್ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ನಾಗಮಂಗಲ ಪಟ್ಟಣದ ಟಿ.ಬಿ.ಬಡಾವಣೆ ಮಾರ್ಗವಾಗಿ ಸ್ವಗ್ರಾಮಕ್ಕೆ ಹೋಗಲು ಬರುತ್ತಿದ್ದ ವೇಳೆ ಮರದ ತುಂಡುಗಳನ್ನು ತುಂಬಿಕೊಂಡು ನಾಗಮಂಗಲ ಕಡೆಗೆ ಚಲಿಸುತ್ತಿದ್ದ ಟ್ರಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ಸ್ಥಳಕ್ಕಾಗಮಿಸಿದ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ಶಿವಕುಮಾರ್ ಪರಿಶೀಲನೆ ನಡೆಸಿ ದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ನಾಗಮಂಗಲ ಪಟ್ಟಣ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮ ವಹಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!