ಬೈಕ್​ ಮತ್ತು ಕ್ಯಾಂಟರ್​ ನಡುವೆ ಮುಖಾಮುಖಿ ಡಿಕ್ಕಿ: ಮದ್ವೆಯಾದ 23 ದಿನದಲ್ಲೇ ನವದಂಪತಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೈಕ್​ ಮತ್ತು ಕ್ಯಾಂಟರ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನವದಂಪತಿ ಸ್ಥಳದಲ್ಲೇ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ವಿಜಯಪುರ ನಗರ ಹೊರವಲಯದ ಸೋಲಾಪುರ ಬೈಪಾಸ್ ಬಳಿ ನಿನ್ನೆ (ಜೂ.13) ತಡರಾತ್ರಿ ನಡೆದಿದೆ.

ಮೃತರನ್ನು ಹೊನಮಲ್ಲ ತೇರದಾಳ (31) ಮತ್ತು ಅವರ ಪತ್ನಿ ಗಾಯತ್ರಿ (24) ಎಂದು ಗುರುತಿಸಲಾಗಿದೆ. ಹೊನಮಲ್ಲ ಅವರು ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಮೇ 22 ರಂದು ಗಾಯತ್ರಿ ಎಂಬುವರನ್ನು ವಿವಾಹವಾಗಿದ್ದರು. ಮದುವೆಯಾದ 23 ದಿನಗಳಲ್ಲಿ ನವಜೋಡಿ ಸಾವನ್ನಪ್ಪಿದ್ದಾರೆ.

ಸಂಬಂಧಿಕರ ಮಕ್ಕಳ ಹುಟ್ಟುಹಬ್ಬಕ್ಕೆ ಹೋಗಿ ಮನೆಗೆ ಹಿಂದಿರುಗುವಾಗ ಈ ದುರಂತ ಸಂಭವಿಸಿದೆ. ಮೃತರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮಸ್ಥರು ನವಜೋಡಿಯ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಅಪಘಾತದ ಸ್ಥಳಕ್ಕೆ ವಿಜಯಪುರ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!