ಹತ್ತು ಅಡಿ ಆಳದ ಪ್ರಪಾತಕ್ಕೆ ಉರುಳಿದ ಬೈಕ್: ಯುವಕ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಬಿ.ಸಿ.ರೋಡ್ ಸಮೀಪದ‌ ತಲಪಾಡಿಯಲ್ಲಿ ನಡೆದಿದೆ.

ಚಿಕ್ಕಮಗಳೂರು ನಿವಾಸಿ ಯಶೋಧರ ಮೃತಪಟ್ಟ ಯುವಕ. ಬೈಕ್‌ ಚಲಾಯಿಸುತ್ತಿದ್ದ ಅವಿನಾಶ್‌ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ಮಾಲ್‌ನಲ್ಲಿ ಉದ್ಯೋಗಿಗಳಾಗಿದ್ದು, ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ಕೋಲಕ್ಕೆ ಹೋಗಿ ಅಲ್ಲಿಂದ ಹಿಂದಿರುಗುವ ವೇಳೆ ಈ ಅಪಘಾತ ಸಂಭವಿಸಿದೆ.

ಇಂದು ಬೆಳಗ್ಗೆ 3.30ರ ಸುಮಾರಿಗೆ ಬಿಸಿರೋಡಿನ ಕೈಕಂಬ ಸಮೀಪದ ಕೆ.ಎಸ್.ಆರ್.ಟಿ.ಸಿ.ಬಸ್ ಡಿಪೋ ದ ಬಳಿ ಬೈಕ್ ಸುಮಾರು ಹತ್ತು ಅಡಿ ಆಳಕ್ಕೆ ಉರುಳಿ ಬಿದ್ದಿದೆ.

ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯಶೋಧರ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದ್ದಾರೆ.

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!