ಹೊಸದಿಗಂತ ವರದಿ ವಿಜಯಪುರ:
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿ ನಡೆದಿದೆ.
ಮಲಕಾರಿ ಖಂಡಪ್ಪ ತೋರತೆ (33) ಮೃತಪಟ್ಟ ಬೈಕ್ ಸವಾರ. ಮಲಕಾರಿ ಖಂಡಪ್ಪ ಸೊಲ್ಲಾಪುರದಿಂದ ಚಣೆಗಾಂವ ಕಡೆಗೆ ಹೋಗುತ್ತಿದ್ದ ವೇಳೆ ಬೈಕ್ ಹಿಂಬದಿಗೆ ಲಾರಿ ಡಿಕ್ಕಿಯಾಗಿದ್ದು, ಬೈಕ್ ಸವಾರನಿಗೆ ತೀವ್ರ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಅಸುನೀಗಿದ್ದಾನೆ.
ಝಳಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.