February 15, 2026
Sunday, February 15, 2026
spot_img

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್‌ಗೆ 7 ದಿನ CID ಕಸ್ಟಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿದೆ. ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಿದ ವೇಳೆ ಈ ಆದೇಶ ನೀಡಲಾಗಿದೆ.

ವಿಚಾರಣೆ ವೇಳೆ ತನಿಖಾಧಿಕಾರಿಗಳು ಶಾಸಕರ ಆರೋಗ್ಯ ಪರಿಶೀಲನೆಗೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ನ್ಯಾಯಾಧೀಶರ ಮುಂದಿಟ್ಟರು. ಅದನ್ನು ಪರಿಶೀಲಿಸಿದ ಬಳಿಕ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ತಿಳಿಸಿ ಸಿಐಡಿ ವಶಕ್ಕೆ ನೀಡಲು ನ್ಯಾಯಾಲಯ ತೀರ್ಮಾನಿಸಿದೆ.

ಇದನ್ನೂ ಓದಿ:

ಫೆ.12ರಂದು ಅಹಮದಾಬಾದ್‌ನಿಂದ ನಗರಕ್ಕೆ ಆಗಮಿಸಿದ್ದ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ನಡೆದ ಆರೋಗ್ಯ ತಪಾಸಣೆಯಲ್ಲಿ ಹೃದಯ ಸಂಬಂಧಿತ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ನಡೆಸಲಾಗಿತ್ತು.

ಇದರ ನಡುವೆ ಜಾಮೀನು ಪಡೆಯಲು ಮೇಲ್ಮಟ್ಟದ ನ್ಯಾಯಾಲಯವನ್ನು ಸಂಪರ್ಕಿಸಿದರೂ ಅವರಿಗೆ ಅನುಕೂಲಕರ ಆದೇಶ ಸಿಗಲಿಲ್ಲ. ಪ್ರಕರಣದಲ್ಲಿ ನಡೆದ ಘಟನೆಗಳ ಸರಣಿಯನ್ನು ಗಮನಿಸಿ ಶಾಸಕರ ವಿಚಾರಣೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !