ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ: ನಮ್ಮ ರಾಜ್ಯದಲ್ಲಿ ಹೈ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.

ಅದರಲ್ಲೂ ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಆಂಧ್ರ, ತೆಲಂಗಾಣದಲ್ಲಿ ಎಚ್‌5ಎನ್‌1 ವೈರಸ್​ನಿಂದ ಉಂಟಾಗುವ ಸೋಂಕಿನಿಂದ ಕೋಳಿಗಳು ಮತಪಡುತ್ತಿವೆ. ಪರಿಣಾಮವಾಗಿ ಕರ್ನಾಟಕದ ಗಡಿ ಭಾಗಗಳಲ್ಲಿ ಆತಂಕ ಮನೆ ಮಾಡಿದೆ.

ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ ಕೋಳಿಗಳ ಮಾರಣಹೋಮವೇ ನಡೆಯುತ್ತಿದೆ. ಸಂಯುಕ್ತ ನೆಲ್ಲೂರು ಜಿಲ್ಲೆಯ ಗುಡೂರು, ಸುಳ್ಳೂರುಪೇಟ, ನಾಯ್ಡುಪೇಟ ಮತ್ತು ವೆಂಕಟಗಿರಿ ಪ್ರದೇಶಗಳಲ್ಲಿ ಚಿಕನ್ ಶಾಪ್​ಗಳಲ್ಲಿ ನೂರಾರು ಕೋಳಿಗಳು ಸಾಯುತ್ತಿವೆ. ಜನ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕೋಳಿ ಖರೀದಿಗೆ ಜನ ಹಿಂದೇಟು ಹಾಕ್ತಿದ್ದು, ಚಿಕನ್ ಶಾಪ್ ಮಾಲೀಕರು ಅಂಗಡಿಗಳನ್ನು ಬಂದ್ ಮಾಡುತ್ತಿದ್ದಾರೆ.

ಹೀಗೆ ಸತ್ತ ಕೋಳಿಗಳನ್ನ ಮಣ್ಣು ಮಾಡುತ್ತಿಲ್ಲ. ಬದಲಾಗಿ ಮೀನುಗಳಿಗೆ ಆಹಾರವಾಗಿ ಹಾಕಲಾಗುತ್ತಿದೆ. ಇದೇ ಮೀನುಗಳನ್ನು ತಿನ್ನುವ ಜನರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ. ನಗರಸಭೆ, ಪುರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಲ್ಲಿನ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೇರೆ ರಾಜ್ಯಗಳಿಂದ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಬೀದರ್‌, ಬೆಳಗಾವಿ, ಬಳ್ಳಾರಿ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಬೇರೆ ರಾಜ್ಯಗಳಿಂದ ಬರುವ ಕೋಳಿ ಹಾಗೂ ಮೊಟ್ಟೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಆದರೆ, ರಾಜ್ಯದಲ್ಲಿ ಹಕ್ಕಿಜ್ವರ ಇಲ್ಲದಿದ್ರೂ, ಬಿಸಿಲಿನ ತಾಪದ ಪರಿಣಾಮ ಕೋಳಿ ಮಾಂಸ ವ್ಯಾಪಾರ ಕಡಿಮೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!