ಬಿಟ್ ಕಾಯಿನ್ ಹಗರಣ: ಎಸ್ ಐಟಿ ವಿಚಾರಣೆಗೆ ಹಾಜರಾದ ನಲಪಾಡ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರು ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸಿಐಡಿ ಕಚೇರಿಯ ಎಸ್ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಬಿಟ್ ಕಾಯಿನ್ ಹಗರಣದ ಪ್ರಮುಖ ರೂವಾರಿ ಎನ್ನಲಾದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆ ನಲಪಾಡ್ ವ್ಯಾವಹಾರಿಕ ನಂಟು ಹೊಂದಿ ದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪ ಹಿನ್ನೆಲೆಯಲ್ಲಿ ನಲಪಾಡ್ ಅವರಿಗೆ ವಿಚಾರಣೆಗೆ ಬರುವಂತೆ ಸೆಕ್ಷನ್‌ 41ರಡಿ SIT ನೋಟಿಸ್‌ ನೀಡಿತ್ತು. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಡಿವೈಎಸ್ ಪಿ ಬಾಲರಾಜ್ ಮುಂದೆ ನಲಪಾಡ್ ವಿಚಾರಣೆಗೆ ಹಾರಜಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!