ಬಿಜೆಪಿ -ಎಐಎಡಿಎಂಕೆ ಮೈತ್ರಿ ಬಿರುಕು: ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ ಎಂದ ಉದಯನಿಧಿ ಸ್ಟಾಲಿನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಮಿಳುನಾಡಿನಲ್ಲಿ ಬಿಜೆಪಿ -ಎಐಎಡಿಎಂಕೆ ನಡುವಿನ ಬಿರುಕು ಕುರಿತು ‘ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ’ ಎಂದು ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

‘ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ’ ಎಂಬಂತೆ ಎರಡೂ ಪಕ್ಷಗಳು ಒಟ್ಟಾಗಿ ಮುಂದಿನ ಚುನಾವಣೆಗೆ ಸ್ಪರ್ಧಿಸಬಹುದು. ಎಐಎಡಿಎಂಕೆ ಬಿಜೆಪಿಯೊಂದಿಗಿನ ತನ್ನ ಸಂಬಂಧವನ್ನು ಕಡಿದುಕೊಂಡರೂ, 2024ರ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ ವಿಜಯಶಾಲಿಯಾಗಲಿದೆ ಎಂದು ಅವರು ಭವಿಷ್ಯ ನುಡಿದರು.

ಎಐಎಡಿಎಂಕೆ ಮತ್ತು ಬಿಜೆಪಿ ಜಗಳವಾಡುವುದು ಮೊದಲ ಬಾರಿಯಲ್ಲ ಆದರೆ ಚುನಾವಣೆಯ ಸಮಯದಲ್ಲಿ, ಅವರು ಮತ್ತೆ ಒಂದಾಗುತ್ತಾರೆ . ಏಕೆಂದರೆ ಒಬ್ಬರು ದರೋಡೆಕೋರರು ಮತ್ತು ಇನ್ನೊಬ್ಬರು ಕಳ್ಳರು” ಎಂದು ಅವರು ಹೇಳಿದರು.

ಎಐಎಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯ ನಂತರ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಜೊತೆಗಿನ ತನ್ನ ಸಂಬಂಧವನ್ನು ಎಐಎಡಿಎಂಕೆ ಮುರಿದುಕೊಂಡಿದೆ, ಬಿಜೆಪಿಯು ಎಐಎಡಿಎಂಕೆಯ ಮಾಜಿ ನಾಯಕರ ಬಗ್ಗೆ ಅನಗತ್ಯ ಟೀಕೆಗಳನ್ನು ಮಾಡುತ್ತಿದೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!