ಬೆಳಗಾವಿಯಲ್ಲಿ ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಬಿಜೆಪಿ, ರೈತರ ಜಂಟಿ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ: ರೈತರ ಕೃಷಿ ಚಟುವಟಿಕೆಗಳಿಗೆ ಸಮರ್ಪಕ ಹಾಗೂ ನಿಗದಿತ ಸಮಯದಲ್ಲಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಹಾಗೂ ಲೋಡ್ ಶೆಡ್ಡಿಂಗ್‌ನಿಂದ ರೈತರಿಗೆ ಉಂಟಾಗುತ್ತಿರುವ ತೊಂದರೆಯನ್ನು ಖಂಡಿಸಿ ಬಿಜೆಪಿ ಹಾಗೂ ರೈತರು ಬೆಳಗಾವಿ–ಬಾಗಲಕೋಟೆ ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಪಂತ ಬಾಳೇಕುಂದ್ರಿ ಗ್ರಾಮದ ಪಂತ ನಗರದಲ್ಲಿರುವ ಕೆಇಬಿ ಕಚೇರಿ ಬಳಿ ಬಿಜೆಪಿ ಗ್ರಾಮೀಣ ಮಂಡಳದ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಬೃಹತ್ ಪ್ರತಿಭಟನೆಯಲ್ಲಿ ನೂರಾರು ರೈತರು-ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ … Continue reading ಬೆಳಗಾವಿಯಲ್ಲಿ ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಬಿಜೆಪಿ, ರೈತರ ಜಂಟಿ ಪ್ರತಿಭಟನೆ