ವಿಧಾನಸಭಾ ಚುನಾವಣೆ: ಧರ್ಮೇಂದ್ರ ಪ್ರಧಾನ್, ಅಣ್ಣಾಮಲೈ ಹೆಗಲಿಗೆ ರಾಜ್ಯ ಉಸ್ತುವಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ-2023 ಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಬಿಜೆಪಿ ಉಸ್ತುವಾರಿಯಾಗಿ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.

ಇಬ್ಬರನ್ನೂ ಕರ್ನಾಟಕ ಚುನಾವಣೆ ಉಸ್ತುವಾರಿಗಳಾಗಿ ನೇಮಕಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ‌ ನಡ್ಡಾ ಆದೇಶ ಹೊರಡಿಸಿದ್ದಾರೆ. ಆದೇಶ ಈ ಕೂಡಲೇ ಜಾರಿಗೆ ಬರುವಂತೆ ಸೂಚಿಸಲಾಗಿದೆ. ಇಬ್ಬರೂ ನಾಯಕರು ರಾಜ್ಯ ರಾಜಕಾರಣದ ಬಗ್ಗೆ ಅರಿತವರಾಗಿದ್ದು, ಧರ್ಮೇಂದ್ರ ಪ್ರಧಾನ್ ಈ ಹಿಂದೆಯೂ ರಾಜ್ಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು. ಇನ್ನೂ ಅಣ್ಣಾಮಲೈ ಕರ್ನಾಟಕದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

Image

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!