July 17, 2026
Friday, July 17, 2026
spot_img

ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಜಿಲ್ಲಾ ಉಸ್ತುವಾರಿಗಳ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ವತಿಯಿಂದ ಕ್ಷೇತ್ರ ಸಂಯೋಜಕರು ಹಾಗೂ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರರವರು ಆದೇಶ ಹೊರಡಿಸಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕ್ಷೇತ್ರ ಸಂಯೋಜಕರಾಗಿ ಎಸ್.ಕೇಶವಪ್ರಸಾದ್, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿಗಳಾಗಿ ಚಿತ್ರದುರ್ಗ ಜಿಲ್ಲೆಗೆ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಹಾಗೂ ದೇವರಾಜು ವಿದ್ಯಾಸಂಸ್ಥೆಯ ಸಿಇಓ ರಘು ಚಂದನ್‌ರವರನ್ನು ನೇಮಕ ಮಾಡಿ ಆದೇಶವನ್ನು ನೀಡಿದ್ದಾರೆ.

ಇದನ್ನೂ ಓದಿ:

ಇದೇ ರೀತಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದ ನಾಲ್ಕು ಜಿಲ್ಲೆಗಳಿಗೂ ಸಹಾ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !