ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ: ಸಚಿವರಿಗೆ ಖಾತೆ ಹಂಚಿಕೆ, ಸಿಎಂ ರೇಖಾ ಗುಪ್ತಾಗೆ ಗೃಹ, ಹಣಕಾಸು ಇಲಾಖೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

27 ವರ್ಷಗಳ ಬಳಿಕ ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿಯಲ್ಲಿ ಇಂದು ನೂತನ ಮುಖ್ಯಮಂತ್ರಿಯಾಗಿ ಇಂದು ರೇಖಾ ಗುಪ್ತಾ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರ ಜೊತೆಗೆ ಡಿಸಿಎಂ ಆಗಿ ಪರ್ವೇಶ್ ವರ್ಮ, ಸಚಿವರಾಗಿ ಮಂಜಿಂದರ್ ಸಿಂಗ್ ಸಿರ್ಸಾ, ರವೀಂದ್ರ ಕುಮಾರ್ ಇಂದ್ರಜ್, ಆಶಿಶ್ ಸೂದ್ ಮತ್ತು ಪಂಕಜ್ ಕುಮಾರ್ ಸಿಂಗ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ರೇಖಾ ಗುಪ್ತಾ ದೆಹಲಿಯ 4ನೇ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ನೂತನ ಸಚಿವರಿಗೆ ಖಾತೆಗಳನ್ನು ಹಂಚಲಾಗಿದೆ.

ಇಂದು ಸಂಜೆ ಮೊದಲ ಸಂಪುಟ ಸಭೆ ಕೂಡ ನಡೆದಿದೆ. ಪ್ರಮುಖ ಖಾತೆಗಳನ್ನು ಪರ್ವೇಶ್ ವರ್ಮಾ (ಉಪ ಮುಖ್ಯಮಂತ್ರಿ), ಮಂಜಿಂದರ್ ಸಿಂಗ್ ಸಿರ್ಸಾ ಮತ್ತು ಇತರ ಸಚಿವರಿಗೆ ಹಂಚಲಾಗಿದೆ.

ಖಾತೆ ಹಂಚಿಕೆಯ 1 ಗಂಟೆಯ ನಂತರ, ದೆಹಲಿ ಸಚಿವ ಸಂಪುಟವು ಮುಖ್ಯಮಂತ್ರಿ ರೇಖಾ ಗುಪ್ತಾ ಅಧ್ಯಕ್ಷತೆಯಲ್ಲಿ ಮೊದಲ ಸಂಪುಟ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಭಾರತ್ ಯೋಜನೆ ಮತ್ತು ಸಿಎಜಿ ವರದಿಯ ಮಂಡನೆ ಕುರಿತು ಎರಡು ಕಾರ್ಯಸೂಚಿಗಳನ್ನು ಚರ್ಚಿಸಲಾಯಿತು.

ದೆಹಲಿಯ ಎಬಿವಿಪಿ ವಿದ್ಯಾರ್ಥಿ ರಾಜಕೀಯದಲ್ಲಿ ಬೇರುಗಳನ್ನು ಹೊಂದಿರುವ ಅನುಭವಿ ಆರ್‌ಎಸ್‌ಎಸ್ ಸದಸ್ಯೆ ರೇಖಾ ಗುಪ್ತಾ ಅವರು ಗೃಹ, ಹಣಕಾಸು, ವಿಜಿಲೆನ್ಸ್ ಮತ್ತು ಯೋಜನೆ ಖಾತೆಗಳನ್ನು ಸಹ ನಿರ್ವಹಿಸಲಿದ್ದಾರೆ.

ಪರ್ವೇಶ್ ವರ್ಮಾ (ಉಪ ಮುಖ್ಯಮಂತ್ರಿ) ಅವರಿಗೆ ಶಿಕ್ಷಣ, ಪಿಡಬ್ಲ್ಯೂಡಿ ಮತ್ತು ಸಾರಿಗೆ ಖಾತೆಗಳನ್ನು ನೀಡಲಾಗಿದೆ.

ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೆ ಆರೋಗ್ಯ, ನಗರಾಭಿವೃದ್ಧಿ ಮತ್ತು ಕೈಗಾರಿಕೆಗಳ ಖಾತೆಗಳನ್ನು ನೀಡಲಾಗಿದೆ.

ರವೀಂದ್ರ ಕುಮಾರ್ ಇಂದ್ರಜ್ ಸಮಾಜ ಕಲ್ಯಾಣ, ಎಸ್‌ಸಿ/ಎಸ್‌ಟಿ ವ್ಯವಹಾರಗಳು ಮತ್ತು ಕಾರ್ಮಿಕ ಖಾತೆಗಳನ್ನು ನಿರ್ವಹಿಸಲಿದ್ದಾರೆ.

ಕಪಿಲ್ ಮಿಶ್ರಾ ನೀರು, ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಖಾತೆಗಳನ್ನು ನಿರ್ವಹಿಸಲಿದ್ದಾರೆ.

ಆಶಿಶ್ ಸೂದ್ ಹೊಸ ಸಂಪುಟದಲ್ಲಿ ಕಂದಾಯ, ಪರಿಸರ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಗಳನ್ನು ನಿರ್ವಹಿಸಲಿದ್ದಾರೆ.

ಪಂಕಜ್ ಕುಮಾರ್ ಸಿಂಗ್ ಅವರಿಗೆ ಕಾನೂನು, ಶಾಸಕಾಂಗ ವ್ಯವಹಾರಗಳು ಮತ್ತು ವಸತಿ ಖಾತೆಗಳನ್ನು ವಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!