ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭೆ ಚುನಾವಣೆಯಲ್ಲಿ ಇಂದು ಬಿಜೆಪಿಯ ಮೂವರು ಅಭ್ಯರ್ಥಿಗಳು ಗೆಲುವಿಗೆ ಸಿಎಂ ಬೊಮ್ಮಾಯಿ ಶುಭಾಶಯ ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಹಾಗೂ ಲೆಹರ್ ಸಿಂಗ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಕನ್ನಡಿಗರ ದನಿಯಾಗಿ ತಾಯಿ ಭಾರತಾಂಬೆಯ ಸೇವೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಶಕ್ತಿ ನಿಮ್ಮದಾಗಲಿ ಎಂದು ಶುಭ ಹಾರೈಸಿದ್ದಾರೆ.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿದ ಶ್ರೀಮತಿ @nsitharaman, ಶ್ರೀ @Jaggesh2 ಹಾಗೂ ಶ್ರೀ ಲೆಹರ್ ಸಿಂಗ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಕನ್ನಡಿಗರ ದನಿಯಾಗಿ ತಾಯಿ ಭಾರತಾಂಬೆಯ ಸೇವೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಶಕ್ತಿ ನಿಮ್ಮದಾಗಲಿ ಎಂದು ಶುಭ ಹಾರೈಸುತ್ತೇನೆ.
— Basavaraj S Bommai (@BSBommai) June 10, 2022