ಬಿಜೆಪಿ ಕೇಂದ್ರೀಯ ಚುನಾವಣಾ ಸಭೆ ಮುಕ್ತಾಯ: ಯಾರಿಗೆ ಸಿಗಲಿದೆ ಟಿಕೆಟ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ( BJP Central Office ) ಮಹತ್ವದ ಸಭೆ ನಡೆಡಿದ್ದು, ಸಭೆ ಮುಕ್ತಾಯಗೊಂಡಿದೆ.

ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ರೆಡಿ ಮಾಡಲಾಗಿದ್ದು, ಪಟ್ಟಿಯಲ್ಲಿ ಅಂತಿಮವಾಗಿ ಯಾರ ಹೆಸರು ಇರಲಿದೆ ಎಂದು ಕಾದುನೋಡಬೇಕಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ( Prime Minister Narendra Modi ) ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ( BJP National President JP Nadda ) ಅವರ ನೇತೃತ್ವದಲ್ಲಿ ನಡೆದ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಯಾರಿಗೆ ಟೆಕೆಟ್ ನೀಡಬೇಕೆಂದು ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದರು.

ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ), ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ( BJP State President Nalin Kumar Kateel ), ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( Farmer CM BS Yediyurappa ) ಸೇರಿದಂತೆ ಹಲವು ರಾಜ್ಯ ನಾಯಕರು ಇಂದಿನ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!