ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಭರ್ಜರಿ ರೋಡ್ ಶೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣಾ (Lok Sabha Elections) ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆಬೀಳಲಿದೆ. ಇತ್ತ ಭರ್ಜರಿ ಪ್ರಚಾರ ನಡೆಯುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Shah) ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

ಪ್ರಧಾನಿ ಮೋದಿ ಬಂದು ಹೋದ ಬೆನ್ನಲ್ಲೇ, ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಭರವಸೆ ತಂದುಕೊಟ್ಟಿದ್ದಾರೆ.

ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತ ಯಾಚಿಸಿದ್ದಾರೆ. ಬರೋಬ್ಬರಿ ಒಂದೂವರೆ ಕಿಲೋ ಮೀಟರ್ ಉದ್ದಕ್ಕೂ ರೋಡ್ ಶೋ ಮಾಡಿ ನಗರ ಮತದಾರರ ಗಮನ ಸೆಳೆದಿದ್ದಾರೆ. ಕೇಸರಿ ಪಡೆಯು ಬಿಜೆಪಿ ಚಾಣಕ್ಯನಿಗೆ ಅದ್ದೂರಿ ಸ್ವಾಗತವನ್ನೇ ಕೋರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!