ಡಿಕೆ ಬ್ರದರ್ಸ್ ಕೋಟೆಗೆ ಬಿಜೆಪಿ ಚಾಣಕ್ಯ ಅಮಿತ್ ಶಾ: ಡಿಕೆ ಶಿವಕುಮಾರ್ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆ (Lok Sabha Elections) ಕಾವು ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿ ಪ್ರಚಾರಗಳನ್ನು ಆರಂಭಿಸಿದ್ದಾರೆ. ಈ ನಡುವೆ ಬಿಜೆಪಿ (BJP) ಹೈಕಮಾಂಡ್ ನಾಯಕರು ಕರ್ನಾಟಕದಲ್ಲಿ ಅಖಾಡಕ್ಕಿಳಿಯಲು ಮುಂದಾಗಿದ್ದಾರೆ. ಡಿಕೆ ಬ್ರದರ್ಸ್ ಕೋಟೆ ಭೇದಿಸಲು ಬಿಜೆಪಿ ಚಾಣಕ್ಯ ಅಮಿತ್ ಶಾ (Amit Shah) ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದಲೇ ಪ್ರಚಾರ ಆರಂಭಿಸಲಿದ್ದಾರೆ.

ಇತ್ತ ಈ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯೆ ನೀಡಿದ್ದು, ಮೋರ್​ ಸ್ಟ್ರಾಂಗ್​ ಮೋರ್ ಎನಿಮಿಸ್​​, ಮೋರ್ ಸ್ಟ್ರಾಂಗ್​ ಮೋರ್ ಪವರ್​ ಎಂದು ಹೇಳಿದ್ದಾರೆ. ಅಲ್ಲದೆ, ಅಮಿತ್ ಶಾ ಆದರೂ ಬರಲಿ ಪ್ರಧಾನಿ ಮೋದಿ ಆದರೂ ಬರಲಿ. ನಮಗೆ ಇದೆಲ್ಲಾ ಹೊಸದು ಅಲ್ಲ ಎಂದಿದ್ದಾರೆ.

ಹೆಚ್​ಡಿ ದೇವೇಗೌಡ ಅವರನ್ನು ಎದುರಿಸಿದ್ದೇವೆ, ಗೌಡರ ಮಗ ಹೆಚ್​ಡಿ ಕುಮಾರಸ್ವಾಮಿ ಅವರನ್ನ ಎದರಿಸಿದ್ದೇವೆ. ಗೌಡರ ಮೊಮ್ಮಗನನ್ನು ಎದುರಿಸಿದ್ದೇವೆ, ಸೊಸೆಯನ್ನೂ ಎದುರಿಸಿದ್ದೇವೆ. ಈಗ ಗೌಡರ ಅಳಿಯನನ್ನ ಎದುರಿಸುತ್ತೇವೆ ಎಂದರು.

ಕೋವಿಡ್ ಸಂದರ್ಭದಲ್ಲಿ ಹೆಣ ಹೊತ್ತರು, ಮಣ್ಣ ಮಾಡಿದವರು ಯಾರು ಇಲ್ಲ. ಈಗ ಮಾತಾಡುವವರು ಕೋವಿಡ್​ನಲ್ಲಿ ಎಲ್ಲಿ ಹೋಗಿದ್ದರು? ಆಹಾರದ ಕಿಟ್, ಔಷದಿ ಕೊಡುವಾಗ ಯಾರು ಇರಲಿಲ್ಲ. ಆಗ ಕ್ಷೇತ್ರದಲ್ಲಿ ಇದ್ದದ್ದು ಕಾಂಗ್ರೆಸ್ ಮತ್ತು ಡಿಕೆ ಸುರೇಶ್ ಮಾತ್ರ ಎಂದರು.

ರಾಜ್ಯದಲ್ಲಿ ಎಲ್ಲಾ 28 ಕ್ಷೇತ್ರಗಳನ್ನು ಗೆದ್ದುಕೊಳ್ಳುವ ಮೂಲಕ ಆಡಳಿತರೂಢ ಪಕ್ಷ ಕಾಂಗ್ರೆಸ್​ಗೆ ಸೆಡ್ಡು ಹೊಡೆಯಲು ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಇನ್ನೊಂದೆಡೆ, ಕಾಂಗ್ರೆಸ್ ಕೂಡ ಕನಿಷ್ಠ 20 ಕ್ಷೇತ್ರಗಳನ್ನು ಗೆದ್ದುಕೊಳ್ಳಲು ರಣತಂತ್ರ ರೂಪಿಸುತ್ತಿದೆ. ಈ ನಡುವೆ ರಾಜ್ಯದಲ್ಲಿ ಅಬ್ಬರದ ಪ್ರಚಾರ ಆರಂಭಗೊಂಡಿದೆ. ಬಿಜೆಪಿ ಹೈಕಮಾಂಡ್ ಘಟಾನುಘಟಿ ನಾಯಕರನ್ನು ಪ್ರಚಾರದ ಅಖಾಡಕ್ಕಿಳಿಸಲು ಮುಂದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!