ಹೊಸದಿಗಂತ ವರದಿ ಬಳ್ಳಾರಿ:
ನಗರ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾಮಗಾರಿಗಳ ವಿವರಗಳನ್ನು ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ನಗರ ಘಟಕದ ಪದಾಧಿಕಾರಿಗಳು, ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಬೀ.ನಾಗೇಂದ್ರ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಮೊದಲೇ ನಿಗಧಿಯಾದಂತೆ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಮನವಿ ನೀಡಲು ನಿರ್ಧರಿಸಿದ್ದರು. ಇಡಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ, ಶಾಸಕರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ ಹಿನ್ನೆಲೆ, ಜಿಲ್ಲಾ ಉಸ್ತುವಾರಿ ಸಚಿವ ಜಿ.ನಾಗೇಂದ್ರ ಅವರ ನಗರದ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ, ನಗರ ಘಟಕದ ಅಧ್ಯಕ್ಷ ಕೆ. ಬಿ. ವೆಂಕಟೇಶ್ವರ, ಮುಖಂಡರಾದ ಎಸ್.ಗುರುಲಿಂಗನಗೌಡ, ಮಾರುತಿ ಪ್ರಸಾದ್ ಸರ್ವಶೆಟ್ಟಿ, ರಾಮಂಜಿನೆಯ, ಸಿದ್ದೇಶ್ ಉಪ್ಪಾರ್, ಸೋಮನಗೌಡ, ಮಲ್ಲೇಶ್ ಕುಮಾರ್, ಪಾಲಿಕೆ ಸದಸ್ಯ ಹನುಮಂತಪ್ಪ ಸೇರಿದಂತೆ ಇತರರು ಇದ್ದರು.