ದಿಗಂತ ವರದಿ ಬಳ್ಳಾರಿ:
ಬಳ್ಳಾರಿ – ವಿಜಯನಗರ ಲೋಕಸಭೆ (ಎಸ್ಟಿ ಮೀಸಲು) ಕ್ಷೇತ್ರದ ಚುನಾವಣೆ ಹಿನ್ನೆಲೆ ಶುಕ್ರವಾರ ನಾಮಪತ್ರ ಸಲ್ಲಿಸಲು ಆಗಮಿಸಿದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮುಖಾಮುಖಿಯಾದರು.
ಈ ವೇಳೆ ನೆರೆದ ಸಾವಿರಾರು ಜನ ಬಿಜೆಪಿ ಕಾರ್ಯಕರ್ತರಿಂದ ಮೋದಿ, ಮೋದಿ ಜೈಕಾರ ಮೊಳಗಿದವು. ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರು ನಾಮಪತ್ರ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಸಚಿವರಾದ ಎಂ. ಬಿ.ಪಾಟೀಲ್, ಜಮೀರ್ ಅಹ್ಮದ್ ಖಾನ್, ಶಾಸಕರಾದ ನಾರಾ ಭರತ್ ರೆಡ್ಡಿ, ಡಾ.ಶ್ರೀನಿವಾಸ್, ಜೆ.ಎನ್.ಗಣೇಶ್, ಏಚ್.ಆರ್.ಗವಿಯಪ್ಪ, ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಭೀಮಾ ನಾಯ್ಕ್, ಸೇರಿದಂತೆ ಇತರರು ಸುದ್ದಿಗೋಷ್ಠಿ ನಡೆಸಿ, ವಾಪಸಾಗುವಷ್ಟರಲ್ಲೇ, ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ಮೂಲಕ, ಡಿಸಿ ಕಚೇರಿಗೆ ಆಗಮಿಸಿದರು. ಈ ವೇಳೆ ಕಾಂಗ್ರೆಸ್ ನಾಯಕರು, ಹೊರಹೋಗುವ ಮುನ್ನ, ಮುಖ್ಯದ್ವಾರ ಬಳಿ ಜಮಾಯಿಸಿದ ಬಿಜೆಪಿ ಸಾವಿರಾರು ಕಾರ್ಯಕರ್ತರು ಮೋದಿ, ಮೋದಿ ಘೋಷಣೆ ಕೂಗಿದರು. ಈ ವೇಳೆ ಪೋಲೀಸ್ ರು ಕೈ ನಾಯಕರನ್ನು ಕಳಿಸುವುಲ್ಲಿ ಕೆಲ ಕಾಲ ಹರಸಾಹಸಪಟ್ಟರು.