ಹೊಸದಿಗಂತ ಡಿಜಿಟಲ್ ಡೆಸ್ಕ್
ಜನರ ನಡುವೆ ಶಾಂತಿ ಕದಡುವ ಸುಳ್ಳು ಸುದ್ದಿ ಪೋಸ್ಟ್ ಮಾಡಿದ ಆರೋಪ ಮಾಡಿ ಅಪರಾಧಕ್ಕಾಗಿ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ಗೆ ದೂರು ಕೊಡಲಾಗಿದೆ. ರಾಜ್ಯ ಬಿಜೆಪಿ ಕೋಶಾಧ್ಯಕ್ಷ ಸುಬ್ಬನರಸಿಂಹ ನೇತೃತ್ವದಲ್ಲಿ ಪ್ರವೀಣ್ ಸೂದ್ಗೆ ದೂರು ನೀಡಿದ್ದಾರೆ.
ಹಿಂಸೆ, ದ್ವೇಷ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ಮಾದರಿಯ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗುತ್ತಿದೆ ಎಂದು ಬಿಜೆಪಿ ಕಾನೂನು ಪ್ರಕೋಷ್ಠ ಆಕ್ಷೇಪಿಸಿದೆ.