ಹೈದರಾಬಾದ್​ನಲ್ಲಿ ಬಿಜೆಪಿ ಕಾರ್ಯಕಾರಿಣಿ: ದಕ್ಷಿಣದ ಮತ್ತೊಂದು ರಾಜ್ಯದ ಗೆಲುವಿಗೆ ಕೇಸರಿ ಕಣ್ಣು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಹಾರಾಷ್ಟ್ರದಲ್ಲಿ ಅಧಿಕಾರದ ಗದ್ದುಗೆಗೆಏರುವ ಮೂಲಕ ಮತ್ತೊಂದು ಯಶಸ್ಸು ಪಡೆದಿರುವ ಬಿಜೆಪಿ ಇದೀಗ ದಕ್ಷಿಣ ರಾಜ್ಯಗಳ ತನ್ನ ಚಿತ್ತ ಹರಿಸಿದ್ದು, ಅದಕ್ಕಾಗಿ ವೇದಿಕೆ ಸಜ್ಜಾಗಿದೆ.

ಇಂದಿನಿಂದ ಹೈದರಾಬಾದ್​ನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಈ ಮೂಲಕ ದಕ್ಷಿಣ ರಾಜ್ಯಗಳ ಮೇಲೆ ಹೆಚ್ಚಿನ ಗಮನ ಹರಿಸಿದೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆ ಎದುರಿಸಲಿರುವ ತೆಲಂಗಾಣದ ಮೇಲೆ ಬಿಜೆಪಿ ಅತಿ ಹೆಚ್ಚು ಗಮನ ನೀಡುತ್ತಿದೆ.

ಹೈದರಾಬಾದ್​ನಲ್ಲಿ ನಡೆಯುತ್ತಿರುವ 48 ಗಂಟೆಗಳ ಸಭೆಗಳಲ್ಲಿ ಭಾಗವಹಿಸಲು ನಿಗದಿಯಾಗಿರುವ 345ರಲ್ಲಿ 300 ಜನ ಮುಖಂಡರು ಈಗಾಗಲೇ ಹೈದರಾಬಾದಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಲಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಈಗಾಗಲೇ ಹೈದರಾಬಾದಿಗೆ ಆಗಮಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!